ವಾಹನವನ್ನು ಅಡ್ಡಗಟ್ಟಿ ಚಾಲಕನಿಂದ ಹಣ ದೋಚಿದ ದರೋಡೆಕೋರರು

ಬೆಂಗಳೂರು, ಜು.5- ಈಚರ್ ವಾಹನವನ್ನು ಹಿಂಬಾಲಿಸಿಕೊಂಡು ಹೋದ ನಾಲ್ವರು ದರೋಡೆಕೋರರು ಅಡ್ಡಗಟ್ಟಿ ಚಾಲಕನನ್ನು ಬೆದರಿಸಿ 72,600ರೂ. ಕಸಿದುಕೊಂಡು ಪರಾರಿಯಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಜಯಕುಮಾರ್ ಎಂಬುವವರು ಈಚರ್ ವಾಹನದಲ್ಲಿ ತೆರಳುತ್ತಿದ್ದರು.ಬಿಜಿ ರಸ್ತೆಯಲ್ಲಿ ನಾಲ್ವರು ದರೋಡೆಕೋರರು ಎರಡು ಬೈಕ್‍ಗಳಲ್ಲಿ ಹಿಂಬಾಲಿಸಿಕೊಂಡು ಬಂದು ಪ್ರೆಸ್ಟೀಜ್ ಗ್ರೂಪ್ ಬಳಿ ವಾಹನ ಅಡ್ಡಗಟ್ಟಿ ಜಯಕುಮಾರ್ ಅವರನ್ನು ಬೆದರಿಸಿ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಹುಳಿಮಾವು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಶೋಧ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ