ಪುತ್ತೂರು ಅತ್ಯಾಚಾರ ಪ್ರಕರಣ-ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಬೆಂಗಳೂರು, ಜು.5-ಮಂಗಳೂರಿನ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಅವರು ಯಾವ ಸಂಘಟನೆಗೆ ಸೇರಿದ್ದಾರೋ ಅಂತಹ ಸಂಘಟನೆ ನಿಷೇಧಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಬೆಂಗಳೂರು ಘಟಕ ಒತ್ತಾಯಿಸಿದೆ.

ಅತ್ಯಂತ ಹೀನಕೃತ್ಯವಾದ ಈ ಪ್ರಕರಣ ಸುಮಾರು ತಿಂಗಳುಗಳ ಹಿಂದೆ ನಡೆದಿದ್ದು, ಇದರಲ್ಲಿ ಶಾಮೀಲಾದವರು ಯಾವುದೇ ರಾಜಕೀಯ ಪಕ್ಷ, ವಿದ್ಯಾರ್ಥಿ ಸಂಘಟನೆಯಲ್ಲಿ ಕಂಡು ಬಂದಲ್ಲಿ ಅಂತಹ ಸಂಘಟನೆ ಪಕ್ಷದ ಮಾಹಿತಿ ಪಡೆದು ಸಂಘಟನೆಯನ್ನು ನಿಷೇಧಿಸಬೇಕು ಎಂದು ಸಮಿತಿಯ ಅಧ್ಯಕ್ಷ ಜಿ.ಜನಾರ್ಧನ್ ಆಗ್ರಹಿಸಿದ್ದಾರೆ.

ಈ ಕೃತ್ಯದ ಹಿಂದೆ ಅನೇಕ ಅನುಮಾನಗಳು ಮೂಡುತ್ತಿವೆ. ಅತ್ಯಾಚಾರ ನಡೆದು ಮೂರ್ನಾಲ್ಕು ತಿಂಗಳು ಕಳೆದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ಥರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ನ್ಯಾಯ ಒದಗಿಸಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕ್ರಮವಹಿಸಬೇಕು ಎಂದು ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ