ಡಿಕೆಶಿ-ದೇವೇಗೌಡರ ಮಾತುಕತೆ

ಬೆಂಗಳೂರು, ಜು.7-ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಉಂಟಾಗಿರುವ ಮೈತ್ರಿ ಸರ್ಕಾರದ ಸಂಕಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್‍ನ ನಾಯಕರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಹತ್ವದ ಮಾತುಕತೆ ನಡೆಸಿದರು.

ಡಿ.ಕೆ.ಶಿವಕುಮಾರ್ ಅವರೊಂದಿಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಪಾಲ್ಗೊಂಡು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಗೌಡರೊಂದಿಗೆ ಚರ್ಚೆ ನಡೆಸಿದರು.

ಇಂದು ಮಧ್ಯಾಹ್ನ ಪದ್ಮನಾಭನಗರದ ನಿವಾಸದಲ್ಲಿ ಗೌಡರನ್ನು ಭೇಟಿಯಾಗಿ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಿರುವ ಮಾರ್ಗೋಪಾಯಗಳ ಗಂಭೀರ ಸಮಾಲೋಚನೆ ನಡೆಸಿದರು.

ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಕಾರಣಗಳು ಮುಂದೆ ಉಭಯ ಪಕ್ಷಗಳು ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಂತೆ ಗಂಭೀರ ಚರ್ಚೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ