ಬೆಂಗಳೂರು, ಜು.7-ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರವನ್ನು ಕಾಪಾಡಿಕೊಳ್ಳುವುದಷ್ಟೇ ಮುಖ್ಯ. ಸಚಿವ ಸ್ಥಾನ ಪಡೆಯುವುದು ಅಥವಾ ಬೇರೆ ಆಮಿಷಗಳು ಮುಖ್ಯ ಅಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಹೈಕಮಾಂಡ್ ನಾಯಕರ ಜೊತೆ ಸಭೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ವೇಣುಗೋಪಾಲ್ ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹಲವು ರೀತಿಯಲ್ಲಿ ಚರ್ಚೆಗಳು ನಡೆದಿವೆ.
ನಮ್ಮ ಶಾಸಕರುಗಳಲ್ಲಿರುವ ಅಸಮಾಧಾನವನ್ನು ಬಗೆಹರಿಸಿ ವಾತಾವರಣ ತಿಳಿಗೊಳಿಸಲು ಪ್ರಯತ್ನ ನಡೆದಿದೆ ಎಂದು ಹೇಳಿದರು.