ಶಾಸಕ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ-ಶಾಸಕಿ ಸೌಮ್ಯ ರೆಡ್ಡಿ

ಬೆಂಗಳೂರು, ಜು.9- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ, ಬೇಡವೇ ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ. ಕ್ಷೇತ್ರದ ಜನರ ಜತೆ ಚರ್ಚೆ ಮಾಡಿದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಹೇಳಿದ್ದಾರೆ.

ಶಾಸಕಾಂಗ ಸಭೆಯಲ್ಲಿ ಭಾಗವಹಿಸಿದ್ದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜೀನಾಮೆ ನೀಡುವ ಬಗ್ಗೆ ನಾನಿನ್ನೂ ಸ್ಪಷ್ಟ ತೀರ್ಮಾನ ತೆಗೆದುಕೊಂಡಿಲ್ಲ. ಮೊದಲು ಕ್ಷೇತ್ರದ ಜನರ ಅಭಿಪ್ರಾಯ ಕೇಳುತ್ತೇನೆ. ನಂತರ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ರಾಜೀನಾಮೆ ಕೊಡುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಕೊಡುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದರು.

ನಿನ್ನೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದೆ. ನಾನು ಮಹಿಳಾ ಕಾಂಗ್ರೆಸ್‍ನ ಪದಾಧಿಕಾರಿಯಗಿ ಕೆಲಸ ಮಾಡುತ್ತಿದ್ದು, ಜವಾಬ್ದಾರಿ ವಹಿಸಿಕೊಂಡ ನಂತರ ಅವರನ್ನು ಭೇಟಿ ಮಾಡಿರಲಿಲ್ಲ. ಹಾಗಾಗಿ ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ