ತೆಲಂಗಾಣ: ತಹಶೀಲ್ದಾರ್‌ ನಿವಾಸದ ಮೇಲೆ ಎಸಿಬಿ ದಾಳಿ, ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ವಶ

ತೆಲಂಗಾಣರಂಗ ರೆಡ್ಡಿ ಜಿಲ್ಲೆಯ ತಹಶೀಲ್ದಾರ್ ಲಾವಣ್ಯ ಅವರ ನಿವಾಸದ ಮೇಲೆ ನಿನ್ನೆ ತಡರಾತ್ರಿ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಲಕ್ಷಾಂತರ ರೂಪಾಯಿ ಮೌಲ್ಯದ ಹಣ ವಶಪಡಿಸಿಕೊಂಡಿದೆ.

ತಹಶೀಲ್ದಾರ್ ಲಾವಣ್ಯ ಅವರ ನಿವಾಸದಲ್ಲಿ ನಡೆಸಲಾದ ದಾಳಿ ವೇಳೆ ಲಕ್ಷಾಂತರ ರೂ. ಮೌಲ್ಯದ ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ನಡೆಸಲಾದ ದಾಳಿ ಸಮಯದಲ್ಲಿ ಒಟ್ಟು 93.5 ಲಕ್ಷ ರೂ. ನಗದು ಮತ್ತು ಚಿನ್ನದ ಆಭರಣಗಳು ದೊರೆತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ