ರಾಜೀನಾಮೆ ನೀಡುವ ಅಗತ್ಯವೇನಿದೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.11-ನಾನೇಕೆ ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡುವ ಅಗತ್ಯ ಏನಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸುತ್ತಿನ ರಾಜಕೀಯ ಜಿದ್ದಾಜಿದ್ದಿಗೆ ತೋಳೇರಿಸಿದ್ದಾರೆ.
ತುರ್ತು ಸಚಿವ ಸಂಪುಟ ಸಭೆಗೂ ಮುನ್ನ ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಮ್ಮಿಶ್ರ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ ಎಂದು ಹೇಳುತ್ತಿದ್ದಂತೆ ಸಿಟ್ಟಾದ ಅವರು, ನಾನೇಕೆ ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ