ಸುಪ್ರೀಂಕೋರ್ಟ್ ತೀರ್ಪಿನಿಂದ ಅಧಿಕಾರ ಕಳೆದುಕೊಳ್ಳಲಿರುವ ಸರ್ಕಾರ

ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ನಾಳೆ ಸರ್ಕಾರ ಸಹಜವಾಗಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿಶ್ವಾಸಮತ ಗೆದ್ದು ಅಧಿಕಾರ ಹಿಡಿಯಲಿದೆ. ಕೆಲವು ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದು ಸರಿಯಲ್ಲ ಎಂದರು.

ಸುಪ್ರೀಂಕೋರ್ಟ್ ಆದೇಶದಲ್ಲಿ ಶಾಸಕರ ಮೇಲೆ ಒತ್ತಡ ಹಾಕುವಂತಿಲ್ಲ ಎಂದಿದೆ. ಆದರೂ ಮೈತ್ರಿ ಪಕ್ಷದವರು ಇಂತಹ ಕೆಲಸಕ್ಕೆ ಮುಂದಾದರೆ ಅವರಿಗೆ ಅದು ಶೋಭೆ ತರುವುದಿಲ್ಲ. ಮೈತ್ರಿ ಸರ್ಕಾರ ವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ