ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರ ಸಾವು

ಬೆಂಗಳೂರು, ಜು.21- ನಗರದಲ್ಲಿ ನಿನ್ನೆ ಮೂರು ಕಡೆ ನಡೆದ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಬಾಣಸವಾಡಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಬಿಕಾಂ ವಿದ್ಯಾರ್ಥಿ ಸುಬ್ಬಯ್ಯನಪಾಳ್ಯದ ನಿವಾಸಿ ತರುಣ್‍ದರ್ಶನ್ (20) ಮೃತಪಟ್ಟಿದ್ದಾರೆ.
ಈತ ಕೃಷ್ಣಜಯಂತಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ.ನಿನ್ನೆ ಕಾಲೇಜಿನಿಂದ ಸರ್ಟಿಫಿಕೇಟ್ ತರಲು ಬುಲೆಟ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ಹೆಣ್ಣೂರು-ಗೆದ್ದಲಹಳ್ಳಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ತರುಣ್ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಣಸವಾಡಿ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕ ರಾಮಮೂರ್ತಿಯನ್ನು ಬಂಧಿಸಿದ್ದಾರೆ.
ಫ್ರೇಸರ್‍ಟೌನ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಬಿಡಬ್ಲ್ಯೂಎಸ್‍ಎಸ್‍ಬಿಯ ಮ್ಯಾನಹೋಲ್ ಸ್ವಚ್ಛಪಡಿಸುವ ವಾಹನ ಡಿಕ್ಕಿ ಹೊಡೆದು ಆಟೋಮೊಬೈಲ್ ಎಲೆಕ್ಟ್ರಿಕಲ್ ಮ್ಯಾಕಾನಿಕ್ ಮೃತಪಟ್ಟಿದ್ದಾರೆ.

ಶಿವಾಜಿನಗರದ ಸಾದಿಕ್ (30) ಮೃತಪಟ್ಟ ದುರ್ದೈವಿ.ಈತ ಸೆಂಟ್‍ಜಾನ್ ರಸ್ತೆಯ ಲಾವಣ್ಯ ಟಾಕೀಸ್ ಬಳಿ ನಿನ್ನೆ ಸಂಜೆ ರಸ್ತೆ ದಾಟುತ್ತಿದ್ದಾಗ ಜಲಮಂಡಳಿಯ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಈ ಸಂಬಂಧ ಫ್ರೇಸರ್‍ಟೌನ್ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ವೈಟ್‍ಫೀಲ್ಡ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧೆಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಧವನಗರದ ನಿವಾಸಿ ಚೆನ್ನಮ್ಮ (80) ಮೃತಪಟ್ಟ ವೃದ್ಧೆ.ಇವರು ನಿನ್ನೆ ಸಂಜೆ 4.45ರಲ್ಲಿ ವರ್ತೂರು ರಸ್ತೆಯ ಧರ್ಮರಾಯ ದೇವಸ್ಥಾನ ಬಳಿ ಮನೆಗೆ ನಡೆದು ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.
ವೈಟ್‍ಫೀಲ್ಡ್ ಸಂಚಾರಿ ಠಾಣೆ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ