ಎಂಟಿ.ಬಿ.ನಾಗರಾಜ್ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದು

MTB NAGARAJ

ಬೆಂಗಳೂರು, ಜು.21-ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಬಗ್ಗೆ ಎಂ.ಟಿ.ಬಿ.ನಾಗರಾಜ್ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ಆಕ್ಷೇಪಿಸಿದೆ.

ಶಾಸಕರಾಗಿ, ಸಚಿವರಾಗಿ ಅಧಿಕಾರ ಪಡೆದ ನೀವು ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರ ಮಾರಿಗೆ ನೀಡಿರುವ ಗೌರವವಾದರೂ ಏನು ಎಂದು ಪ್ರಶ್ನಿಸಿರುವುದಲ್ಲದೆ, ಪಕ್ಷದ ಮುಖಂಡರ ಸಮ್ಮುಖದಲ್ಲೇ ರಾಜೀನಾಮೆ ಹಿಂಪಡೆಯುವುದಾಗಿ ಹೇಳಿ ನಂತರ ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಿರುವ ನೀವು ಕೇವಲ ನಿಮ್ಮ ಸ್ವಾರ್ಥಕ್ಕಾಗಿ ರಾಮಲಿಂಗಾರೆಡ್ಡಿ ಹೆಸರನ್ನು ಎಳೆದು ತರುತ್ತಿದ್ದೀರಿ ಎಂದು ಆರೋಪಿಸಿದೆ.

ರಾಮಲಿಂಗಾರೆಡ್ಡಿ ಅವರು ಪಕ್ಷದ ಕೆಲವು ವಿಚಾರಗಳಿಗೆ ಬೇಸತ್ತು ದೂರ ಉಳಿದಿದ್ದರು.ಆದರೆ ಅವರು ಕಾರ್ಯಕರ್ತರು ಹಾಗೂ ಪಕ್ಷದ ಹಿರಿಯ ಮುಖಂಡರ ವಿರುದ್ಧ ಅಲ್ಲ. ಹಾಗಾಗಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದು ಪಕ್ಷಕ್ಕೆ ಬಲ ತುಂಬಿದ್ದಾರೆ.
ನಿಮಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಸಾರ್ವಜನಿಕರ ಬಗ್ಗೆ ಗೌರವವಿದ್ದರೆ ಸದನಕ್ಕೆ ಆಗಮಿಸಿ ಪಕ್ಷದ ನಿಷ್ಠೆ ತೋರಿಸಬೇಕೆಂದು ಆಗ್ರಹಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ