ಮೂರನೇ ದಿನಕ್ಕೆ ಕಾಲಿಟ್ಟ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ

ಬೆಂಗಳೂರು, ಜು.22- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈತನಕ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಹಾಜರಾಗಿರಲಿಲ್ಲ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್‍ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಆನಂದ್‍ಸಿಂಗ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಪ್ರತಾಪ್‍ಗೌಡ ಪಾಟೀಲ್, ಬಿ.ಸಿ.ಪಾಟೀಲ್, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮೇಶಖರ್, ಬೈರತಿ ಬಸವರಾಜು, ಮುನಿರತ್ನ, ರೋಷನ್ ಬೇಗ್, ಎಚ್.ವಿಶ್ವನಾಥ್, ನಾರಾಯಣಗೌಡ ಹಾಗೂ ಗೋಪಾಲಯ್ಯ ಅವರು ಕೂಡ ಸದನದಲ್ಲಿ ಭಾಗವಹಿಸಿರಲಿಲ್ಲ.
ಉಳಿದ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿಯ ಬಹುತೇಕ ಶಾಸಕರು ಸದನದ ಕಾರ್ಯಕಲಾಪದಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ