ಮುಖ್ಯಮಂತ್ರಿಗಳ ಮನವಿಗೆ ಸಮ್ಮತಿ ನೀಡದ ಸ್ಪೀಕರ್

ಬೆಂಗಳೂರು, ಜು.22-ವಿಶ್ವಾಸ ಮತ ಯಾಚನೆ ನಿರ್ಣಯ ಮೇಲಿನ ಚರ್ಚೆಯನ್ನು ಮುಂದುವರೆಸಲು ಎರಡು ದಿನ ಕಾಲಾವಕಾಶ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಈ ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಆದರೆ ಸಭಾಧ್ಯಕ್ಷರು ಮುಖ್ಯಮಂತ್ರಿಯವರ ಮನವಿಗೆ ಸಮ್ಮತಿಸಿಲ್ಲ. ಕಳೆದ ಶುಕ್ರವಾರ ಈ ಬಗ್ಗೆ ಸದನದಲ್ಲೇ ಸ್ಪಷ್ಟಪಡಿಸಲಾಗಿದೆ. ತಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ