ಪಕ್ಷ ದ್ರೋಹ ಮಾಡಿದರಿಗೆ ತಕ್ಕ ಪಾಠ ಕಲಿಸಬೇಕು-ದಿನೇಶ್ ಗುಂಡುರಾವ್

ಬೆಂಗಳೂರು, ಜು.23- ಪಕ್ಷ ದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಮುಂದಿನ ದಿನಗಳಲ್ಲಿ ಬೇರೆ ಪಕ್ಷಗಳು ಕೂಡ ಇವರಿಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದರು.
ಪಕ್ಷದಿಂದ ಎಲ್ಲಾ ರೀತಿಯ ಅನುಕೂಲಗಳನ್ನು ಪಡೆದು ಅಧಿಕಾರ ಅನುಭವಿಸಿ ಕೊನೆಗೆ ಪಕ್ಷಕ್ಕೆ ದ್ರೋಹ ಮಾಡುವ ಮತ್ತು ಸರ್ಕಾರವನ್ನು ಉರುಳಿಸುವ ಸಂಚಿನಲ್ಲಿ ಭಾಗಿಯಾಗಿರುವವರ ವಿರುದ್ಧ ಪಕ್ಷದಿಂದಲೂ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದರು.
ಈಗಾಗಲೇ ಸ್ಪೀಕರ್ ಅವರಿಗೆ ಈ ಕುರಿತು ದೂರು ನೀಡಲಾಗಿದ್ದು, ವಿಚಾರಣೆ ಮುಗಿದಿದೆ.ತೀರ್ಪು ತ್ವರಿತವಾಗಿ ಪ್ರಕಟಗೊಳ್ಳಬೇಕು ಎಂಬುದು ನಮ್ಮ ವಾದ. ಪ್ರಸ್ತುತ ರಾಜಕಾರಣ ಬೆಳವಣಿಗೆಯಲ್ಲಿ ವಿಳಂಬ ಮಾಡಬಾರದು ಎಂದು ವಾದಿಸಿದ್ದೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ