ಸರ್ಕಾರ ರಚನೆಗೆ ಬಿಜೆಪಿಯಿಂದ ಸಕಲ ಸಿದ್ಧತೆ

ಬೆಂಗಳೂರು, ಜು.24- ತಿಂಗಳ ಬಳಿಕ ಕೊನೆಗೂ ದೋಸ್ತಿ ಸರ್ಕಾರ ಪತನವಾಗಿದೆ.ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ.

ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ ಅಥವಾ ಶುಕ್ರವಾರ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಯಡಿಯೂರಪ್ಪ ಗುರುವಾರದ ಮುಹೂರ್ತದಲ್ಲಿ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ಕಚೇರಿಯ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.ಯಡಿಯೂರಪ್ಪ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಆಗಲಿದ್ದಾರೆ.

ಸಭೆಯಲ್ಲಿ ಪಕ್ಷೇತರ ಶಾಸಕರಾದ ಆರï.ಶಂಕರï ಮತ್ತು ಹೆಚï.ನಾಗೇಶï ಸಹ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ ಸಭೆಯಲ್ಲಿ ರಾಜ್ಯಪಾಲರ ಭೇಟಿ ಬಗ್ಗೆ ನಿರ್ಧರಿಸಲಿದ್ದಾರೆ.
ಆಗಸ್ಟ್ 1ರವೆರೆಗೂ ಆಷಾಢ ಇರುವ ಹಿನ್ನೆಲೆ, ಸಚಿವ ಸಂಪುಟ್ ರಚನೆ ಕುರಿತು ಜ್ಯೋತಿಷಿಗಳ ಸಲಹೆ ಪಡೆದು ಬಿಎಸ್‍ವೈ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ