ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೂಣ-ಹಂಗಾಮಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.24- ಮೈತ್ರಿ ಮುಂದುವರಿಸುವ ಸಂಬಂಧ ಕಾಂಗ್ರೆಸ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ತಿಳಿದಿಲ್ಲ. ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೋಣ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.

ಜೆಡಿಎಸ್ ಶಾಸಕಾಂಗ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಪಕ್ಷದ ಮುಂದಿನ ಕಾರ್ಯತಂತ್ರ ಕುರಿತು ಚರ್ಚಿಸುತ್ತೇವೆ. ಪಕ್ಷದ ಅಸ್ತಿತ್ವ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.ಎಲ್ಲ ಶಾಸಕರಿಗೂ ಸಭೆಗೆ ಹಾಜರಾಗುವಂತೆ ಸೂಚಿಸಿದ್ದೇನೆ ಎಂದರು.

ಕಾಂಗ್ರೆಸ್‍ನೊಂದಿಗೆ ಮೈತ್ರಿ ಮುಂದುವರಿಸುವ ಸಂಬಂಧ ಅವರ ಅಭಿಪ್ರಾಯವೇನಿದೆ ಎಂಬುದು ತಿಳಿದಿಲ್ಲ.ಅವರು ಮುಂದೆ ಏನು ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಎಂದರು.
ಬಿಜೆಪಿ ನಾಯಕರು ನಡೆಸಿರುವ ಶಾಸಕರ ಕುದುರೆ ವ್ಯಾಪಾರ ಕುರಿತು ಕೇಳಿದ ಪ್ರಶ್ನೆಗೆ, ಅದು ಮುಗಿದ ಅಧ್ಯಾಯ.ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ