ನೂತನ ಸರ್ಕಾರದ ಆಡಳಿತಕ್ಕೆ ನಾಲ್ಕು ಸೂತ್ರ ಮುಂದಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ ಈಗ ನೂತನ ಸರ್ಕಾರದ ಆಡಳಿತಕ್ಕಾಗಿ ನಾಲ್ಕು ಸೂತ್ರಗಳನ್ನು ಮುಂದಿಟ್ಟಿದ್ದಾರೆ.

14 ತಿಂಗಳ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನಲೆಯಲ್ಲಿ ಈಗ ಅಧಿಕಾರದ ಚುಕ್ಕಾನೆ ಹಿಡಿದಿರುವ ಯಡಿಯೂರಪ್ಪ ಅವರಿಗೆ ಬರೋಬ್ಬರಿ ನಾಲ್ಕನೇ ಬಾರಿ ಸಿಎಂ ಪದವಿ ಹುದ್ದೆಯ ಅವಕಾಶ ದೊರೆತಿದೆ. ಮುಖ್ಯಮಂತ್ರಿಯಾಗಿ  ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಯಡಿಯೂರಪ್ಪ ಜೆಪಿ ನಡ್ದಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇನ್ನು ಹೆಚ್ಚು ಕಡಿಮೆ ನಾಲ್ಕು ವರ್ಷಗಳ ಕಾಲ ಈ ವಿಧಾನಸಭೆಯ ಕಾಲಾವಧಿ ಇರುವ ಹಿನ್ನಲೆಯಲ್ಲಿ ಮತ್ತೊಮ್ಮೆ ನೂತನ ಸರ್ಕಾರ ಸಾಗಬೇಕಾಗಿರುವ ಕುರಿತಾಗಿ ನಾಲ್ಕು ಅಂಶಗಳನ್ನು ಅವರು ಮುಂದಿಟ್ಟಿದ್ದಾರೆ.’ ನನ್ನ ಮೇಲಿಟ್ಟಿರುವ ನಂಬಿಕೆ ಅಭೂಪೂರ್ವವಾದದ್ದು. ಬೆಳವವಣಿಗೆ, ಸಮೃದ್ಧಿ, ಒಳಗೊಳ್ಳುವಿಕೆ ಮತ್ತು ಅಭಿವೃದ್ದಿ ಇವುಗಳನ್ನು ಆಡಳಿತದ ಆಧಾರ ಸ್ಥಂಭವಾಗಿಟ್ಟುಕೊಂಡು ಕರ್ನಾಟಕದ ಜನರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ನನ್ನ ಎಲ್ಲ ಶಾಸಕರಿಗೆ ಹಾಗೂ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ನಿರಂತರ ಶ್ರಮ ಹಾಗೂ ತಮ್ಮ ಸಮರ್ಪಿಸಿಕೊಂಡಿರುವುದಕ್ಕೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ