ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲಲು ನಡೆದ ಪಿತೂರಿ

ನವದೆಹಲಿ, ಜು. 29– ಉತ್ತರಪ್ರದೇಶದ ರಾಯಬರೇಲಿಯಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಉನ್ನಾವೊ ಅತ್ಯಾಚಾರ ಸಂತ್ರಸ್ತೆ ತೀವ್ರ ಗಾಯಗೊಂಡು ಇನ್ನಿಬ್ಬರು ಮೃತಪಟ್ಟ ಘಟನೆ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿತು.

ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲಲು ನಡೆದ ಪಿತೂರಿ ಎಂದು ಸಮಾಜವಾದಿ ಪಕ್ಷ , ಬಹುಜನ ಸಮಾಜ ಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ ಸದಸ್ಯರು ಆರೋಪಿಸಿ ಸದನದಲ್ಲಿ ಧರಣಿ ನಡೆಸಿದರು.

ಈ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷದ ಸದಸ್ಯರು ಆಗ್ರಹಿಸಿದರು. ಈ ವಿಷಯವಾಗಿ ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರೆದ ಕಾರಣ ಸಭಾಪತಿ ಎಂ.ವೆಂಕಯ್ಯನಾಯ್ಡು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಲಕ್ನೋ ವರದಿ: ಉನ್ನಾವೋ ಸಂತ್ರಸ್ತ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಿದ್ಧವಿರುವುದಾಗಿ ಉತ್ತರಪ್ರದೇಶ ಸರ್ಕಾರ ತಿಳಿಸಿದೆ.
ಈ ಮಧ್ಯೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯನ್ನು ನೋಡಿಕೊಳ್ಳುತ್ತಿರುವ ತಾಯಿ. ಇದು ಅಪಘಾತವಲ್ಲ ನನ್ನ ಮಗಳನ್ನು ಕೊಲ್ಲಲು ನಡೆದ ಒಳಸಂಚು ಈ ಕೃತ್ಯದಲ್ಲಿ ವಕೀಲೆ, ಸಾಕ್ಷಿದಾರರು ಮೃತಪಟ್ಟಿದ್ದಾರೆ. ಇದು ಅಪಘಾತವಲ್ಲ ಕೊಲೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ