ಮುಖ್ಯಮಂತ್ರಿಯವರಿಂದ ನೇಕಾರರ ಸಾಲ ಮನ್ನಾ-ಸಿಎಂ ಅವರಿಗೆ ಅಭಿನಂದನೆ ಸಲ್ಲಿಸಿದ ನೇಕಾರರ ಮಹಾಸಭಾ

ಬೆಂಗಳೂರು, ಜು.30-ನೇಕಾರರ ನೂರು ಕೋಟಿ ರೂ.ಸಂಪೂರ್ಣ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ರಾಜ್ಯ ನೇಕಾರರ ಮಹಾಸಭಾ ಅಭಿನಂದನೆ ಸಲ್ಲಿಸಿದೆ.

ರಾಜ್ಯ ನೇಕಾರ ಮಹಾಸಭಾದ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ಪತ್ರಿಕಾಪ್ರಕಟಣೆ ಮೂಲಕ ಅಭಿನಂದನೆ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ರೈತರು ಹಾಗೂ ನೇಕಾರರನ್ನು ಸಮಾನವಾಗಿ ಭಾವಿಸಿ ಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹ. ಇವರ ಈ ಕ್ರಮಕ್ಕೆ ಸಮಸ್ತ ನೇಕಾರ ಜನಾಂಗ ಚಿರಋಣಿಯಾಗಿರಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ಹಾಗೂ ನೇಕಾರರ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಎಲ್ಲರನ್ನೂ ಹರ್ಷ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ