ಇದೊಂದು ತರ ಅತೃಪ್ತ ಆತ್ಮಗಳ ಸರ್ಕಾರ-ಜೆಡಿಎಸ್

ಬೆಂಗಳೂರು, ಆ.2- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರವಾದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ಕಾಲಹರಣ ಮಾಡುವ ಮೂಲಕ ಆಡಳಿತಯಂತ್ರವನ್ನು ಸ್ಥಗಿತಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ರಾಜ್ಯಾದ್ಯಂತ ಬರಪರಿಸ್ಥಿತಿ ಇದೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯಿದೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರ ಕಳೆದರೂ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ.

ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟ್ವೀಟ್‍ನಲ್ಲಿ ಜೆಡಿಎಸ್ ಆರೋಪಿಸಿದೆ.

ಸರ್ಕಾರದ ಆಡಳಿತಯಂತ್ರವನ್ನು ಸ್ಥಗಿತಗೊಳಿಸಲು ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ ಎಂದು ಟೀಕಿಸಿರುವ ಜೆಡಿಎಸ್ ರಾಜ್ಯದ ಜನಸಾಮ್ಯಾನರ ಪಾಲಿಗೆ ಇದೊಂದು ತರ ಅತೃಪ್ತ ಆತ್ಮಗಳ ಸರ್ಕಾರವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ