ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಶ್ಮೀರ ಬಗ್ಗೆ ಮಹತ್ವದ ನಿರ್ಣಯ ಸಾಧ್ಯತೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್​ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನು ವಶಕ್ಕೆ ಪಡೆದು ಗೃಹ ಬಂಧನದಲ್ಲಿ ಇಡಲಾಗಿದೆ.  ಈ ನಡುವೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನಡೆಯುತ್ತಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.

ಇನ್ನು ಈಗಾಗಲೇ ಜಮ್ಮು-ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ವಾಪಸ್ ಕರೆಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್​ 15ರವರೆಗೆ ಇಂಟರ್​​ನೆಟ್​ ಸೇವೆಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಾಜಕೀಯ ತಜ್ಞರು ಪ್ರಮುಖವಾಗಿ ಎರಡು ಸಾಧ್ಯತೆಗಳನ್ನು ಅಂದಾಜಿಸಿದ್ದಾರೆ. ಒಂದು, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಮತ್ತು 35ಎ ಅನ್ನು ಸಂವಿಧಾನದಿಂದ ತೆಗೆದುಹಾಕಬಹುದು. ಎರಡು, ಜಮ್ಮು-ಕಾಶ್ಮೀರವನ್ನು ಮೂರು ಹೋಳಾಗಿ ವಿಭಜಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ