ನೊಂದ ಜನರ ನೆರವಿಗೆ ಧಾವಿಸಿ ಅಪಘಾತದಲ್ಲಿ ಮೃತಪಟ್ಟ ಮೂವರು

ಯಲ್ಲಾಪುರ,ಆ.11- ತಾವು ಸಂಗ್ರಹಿಸಿದ ಅಗತ್ಯ ವಸ್ತುಗಳನ್ನು ಪ್ರವಾಹ ಪೀಡಿತ ಸಂತ್ರಸ್ತರಿಗೆ ನೀಡಿ ಹಿಂದಿರುಗುತ್ತಿದ್ದ ಬೊಲೆರೋ ಪಿಕಪ್ ವಾಹನ ಹಾಗೂ ಕಾರು ಮುಖಾಮುಖಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬಾಳೆಹದ್ದು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೈಸೂರು ಮೂಲದ ರವಿಕುಮಾರ್(44), ಶಿರಸಿ ತಾಲ್ಲೂಕಿನ ಸೂರಿಮನೆ ನಿವಾಸಿಗಳಾದ ಗಣೇಶ್ ಹೆಗಡೆ(63), ಶಾರದಾ ಮಹಾಬಲೇಶ್ವರ ಹೆಗಡೆ(50) ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ ಎಬಿವಿಪಿ ಮತ್ತು ದತ್ರಿ ಫೌಂಡೇಷನ್ ವತಿಯಿಂದ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಸಾರ್ವಜನಿಕರಿಂದ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಯಲ್ಲಾಪುರಕ್ಕೆ ಕೊಂಡೊಯ್ದು ಅಲ್ಲಿನ ಪರಿಹಾರ ಕೇಂದ್ರಗಳಲ್ಲಿ ಇದ್ದವರಿಗೆ ವಿತರಿಸಿ ತಮ್ಮ ಬುಲೆರೋ ಪಿಕ್‍ವಾಹನದಲ್ಲಿ ರವಿಕುಮಾರ್ ಮತ್ತಿತರರು ಹಿಂದಿರುಗುತ್ತಿದ್ದಾಗ ಶಿರಸಿ ಕಡೆ ಹೋಗುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ