ಎಂ.ಬಿ. ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಆ.17-ಟೆಲಿಫೆÇೀನ್ ಕದ್ದಾಲಿಕೆ ಆರೋಪದ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಮಾಜಿ ಗೃಹ ಸಚಿವ ಆರ್.ಅಶೋಕ್ ಹಾಗೂ ಬಿಜೆಪಿ ಸರಕಾರದ ವಿರುದ್ಧ ಮಾಡಿದ್ದ ಆರೋಪವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.

ಟೆಲಿಪೆÇೀನ್ ಕದ್ದಾಲಿಕೆ ವಿಚಾರದಲ್ಲಿ ಹಿಂದಿನ ಗೃಹ ಸಚಿವರು ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದು ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಆರ್. ಅಶೋಕ್ ಅವರನ್ನು ಕುರಿತೇ ಹೊರತು ಎಂ.ಪಾಟೀಲ್ ಅವರನ್ನು ಉದ್ದೇಶಿಸಿದ್ದಲ್ಲ. ಮಾಧ್ಯಮಗಳಲ್ಲಿ ಇದು ತಪ್ಪಾಗಿ ಬಿಂಬಿತವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಟೆಲಿಫೆÇೀನ್ ಕದ್ದಾಲಿಕೆ ನಡೆದಿಲ್ಲ. ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಾಗಲಿ ಅಥವಾ ಗೃಹಸಚಿವ ಎಂ.ಬಿ. ಪಾಟೀಲ್ ಅವರಾಗಲಿ ಈ ಕೆಲಸ ಮಾಡಿಲ್ಲ ಎಂದು ಕನಕಪುರ ಬಳಿಯ ಸಂಗಮ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೂ ಮಾಧ್ಯಮದವರಿಗೆ ಈ ಬಗ್ಗೆ ಸ್ಪಷ್ಟಪಡಿಸಿರುವುದಾಗಿ ಹೇಳಿದ್ದಾರೆ.

ಎಂ.ಬಿ. ಪಾಟೀಲ್ ಹಾಗೂ ತಮ್ಮ ನಡುವೆ ತಂದಿಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ.ಇದಕ್ಕೆ ಜಾತಿ ಲೇಪವನ್ನೂ ಹಚ್ಚಲಾಗಿದೆ.ಇಂಥ ಪ್ರಯತ್ನಗಳು ಹಿಂದೆಯೂ ನಡೆದಿವೆ. ಈಗಲೂ ನಡೆಯುತ್ತಿವೆ. ಆದರೆ ಇಂಥ ಪ್ರಯತ್ನಗಳಿಂದ ತಮ್ಮಿಬ್ಬರ ಸಂಬಂಧ ಹಾಳು ಮಾಡಲು ಸಾಧ್ಯವಿಲ್ಲ.ಇಂಥ ಪ್ರಯತ್ನಗಳನ್ನು ದಾಟಿ ಮುನ್ನಡೆಯುವ ಮನೋಬಲ ಇಬ್ಬರಿಗೂ ಇದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಪ್ರವಾಹದಿಂದ ತತ್ತರಿಸಿ ಹೋಗಿರುವ ರಾಜ್ಯದ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಜತೆಗೆ ಸಂಪುಟ ರಚನೆ ಮತ್ತಿತರ ಆಂತರಿಕ ವಿಚಾರಗಳಿಂದಲೂ ಜರ್ಝರಿತವಾಗಿರುವ ಬಿಜೆಪಿ,ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಹಾಗೂ ರಾಜಕೀಯ ಕಾರಣಗಳಿಗಾಗಿ ಟೆಲಿಫೆÇೀನ್ ಕದ್ದಾಲಿಕೆ ಎಂಬ ಆರೋಪವನ್ನು ತೇಲಿ ಬಿಟ್ಟಿದ್ದಾರೆ ಎಂದು ದೂರಿದರು.

ಮೂರು ವಾರಗಳಿಂದ ರಾಜ್ಯದಲ್ಲಿ ಏನಾಗುತ್ತಿದೆ ಎಂಬುದು ಜನರಿಗೆ ಸ್ಪಷ್ಟವಾಗಿ ಗೊತ್ತಿದೆ.ಅವರ ಗಮನ ಸೆಳೆಯಲು ಬಿಜೆಪಿ ಮುಖಂಡರು ಯಾವುದೇ ನಾಟಕ ಆಡಿದರೂ ಪ್ರಯೋಜನವಾಗುವುದಿಲ್ಲ ಎಂದು ಶಿವಕುಮಾರ್ ಹೇಳಿದರು.
ಬಿಜೆಪಿ ಮುಖಂಡರು ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸುವ ಬದ್ಧತೆ ಮತ್ತು ಇಚ್ಛಾಶಕ್ತಿ ಪ್ರದರ್ಶಿಸಲಿ. ಅದನ್ನು ಬಿಟ್ಟು ಈ ರೀತಿಯ ಆಧಾರಹಿತ ಆಪಾದನೆಗಳನ್ನು ಮಾಡಿಕೊಂಡು ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ನಿಲ್ಲಿಸಲಿ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ