ಜೆಡಿಎಸ್‍ನ ಯಾವುದೇ ಶಾಸಕರು ಬಿಜೆಪಿಗೆ ಹೋಗುವುದಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಆ.17- ನಮ್ಮ ಪಕ್ಷದ ಯಾವುದೇ ಶಾಸಕರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್‍ನ ಹಲವು ಶಾಸಕರು ಸಾಮೂಹಿಕವಾಗಿ ಬಿಜೆಪಿ ಸೇರಲಿದ್ದಾರೆ ಎಂಬುದು ಕೇವಲ ಊಹಾಪೆÇೀಹ ಅಷ್ಟೆ.ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ತಿಳಿಸಿದರು.
ಪಕ್ಷದ ಮೂವರು ಶಾಸಕರು ಕಾಂಗ್ರೆಸ್ ಶಾಸಕರೊಂದಿಗೆ ಸೇರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದಾರೆ.ಇದರ ಬೆನ್ನಲ್ಲೇ 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ದಟ್ಟವಾಗಿರುವುದನ್ನು ಕುಮಾರಸ್ವಾಮಿ ಅಲ್ಲಗಳೆದಿದ್ದಾರೆ.
ಬಿಜೆಪಿ ಸೇರುವಂತಹ ಯಾವುದೇ ಬೆಳವಣಿಗೆಗಳು ಪಕ್ಷದಲ್ಲಿ ನಡೆದಿಲ್ಲ. ಎಲ್ಲರೂ ಒಟ್ಟಾಗಿದ್ದಾರೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ