ಕೇಂದ್ರ ಸರ್ಕಾದಿಂದ ನಿರ್ಲಕ್ಷ್ಯ ಧೋರಣೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.17- ರಾಜ್ಯದಲ್ಲಿ ನೆರೆ ಹಾವಳಿಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಮಾನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಜ್ಯದಲ್ಲಿ ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭದಲ್ಲಿ ಮಾಜಿ ಪ್ರಧಾನಿ ದಿ.ವಾಜಪೇಯಿ ಅವರ ಆಡಳಿತಾವಧಿಯ ಸರ್ಕಾರವೂ ಸೇರಿದಂತೆ ಹಿಂದಿನ ಯಾವುದೇ ಕೇಂದ್ರ ಸರ್ಕಾರವೂ ಈ ಪ್ರಮಾಣದಲ್ಲಿ ರಾಜ್ಯವನ್ನು ನಿರ್ಲಕ್ಷ್ಯ ಮಾಡಿರಲಿಲ್ಲ ಎಂದು ಟ್ವಿಟ್ಟರ್‍ನಲ್ಲಿ ಟೀಕಿಸಿದ್ದಾರೆ.
ಹಿಂದಿನ ಕೇಂದ್ರ ಸರ್ಕಾರ ಹಾಗೂ ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಹಾಗೆಯೇ ಮುಖ್ಯಮಂತ್ರಿಗಳನ್ನೂ ಈ ರೀತಿ ಅವಮಾನಿಸಿಲ್ಲ ಎಂದು ಕಟುವಾಗಿ ಆಕ್ಷೇಪಿಸಿದ್ದಾರೆ.
ಸ್ವಾಭಿಮಾನಿ ಸ್ವಾವಲಂಬಿ ಕರ್ನಾಟಕ ಕೇಂದ್ರ ಸರ್ಕಾರದ ಇಂತಹ ಧೋರಣೆಯನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ