ನಾಲಿಗೆಗೂ ಮೆದುಳಿಗೂ ಸಂಪರ್ಕ ಕಳೆದುಕೊಂಡು ಮತಿಭ್ರಮಣೆಗೊಂಡಿರುವ ಕಾಂಗ್ರೇಸ್

ಬೆಂಗಳೂರು,ಆ.18- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಟೀಕಿಸಿದ ಕಾಂಗ್ರೆಸ್‍ನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರ ಕಳೆದುಕೊಂಡು ಕರ್ನಾಟಕ ಕಾಂಗ್ರೆಸ್ ನಾಲಿಗೆಗೂ ಮೆದುಳಿಗೂ ಸಂಪರ್ಕ ಕಳೆದುಕೊಂಡು ಮತಿಭ್ರಮಣೆಗೊಂಡಿದೆ ಎಂದು ಅವರು ಟ್ವಿಟರ್‍ನಲ್ಲಿ ಟೀಕಿಸಿದ್ದಾರೆ.

ದೇಶವನ್ನು ಲೂಟಿ ಹೊಡೆದ ಭೂಗತ ಪಾತಕಿಗಳು ಯಾರೆಂಬುದನ್ನು ಜನ ನೋಡಿದ್ದಾರೆ. ಟೆಲಿಪೋನ್ ಕದ್ದಾಲಿಕೆ ಬಗ್ಗೆ ತನಿಖೆಗೆ ಒತ್ತಾಯಿಸಿದ ನಿಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಏನೆಂದು ಕರೆಯುತ್ತೀರಿ ಎಂದು ಕಾಂಗ್ರೆಸ್‍ಗೆ ತಿರುಗೇಟು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ