ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಹಿನ್ನಲೆ-ಇದೇ 20 ರಂದು ರಾಜ್ಯಮಟ್ಟದ ಸಾಂಸ್ಕøತಿಕ ಮೇಳ

ಬೆಂಗಳೂರು, ಆ.19-ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಸದ್ಭಾವನಾ ದಿವಸ್ ಅಂಗವಾಗಿ ಇದೇ 20 ರಂದು ಸಂಜೆ 4 ಗಂಟೆಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ರಾಜ್ಯಮಟ್ಟದ ಸಾಂಸ್ಕøತಿಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ನೆಹರೂ ಯುವ ಕೇಂದ್ರ, ಬೆಂಗಳೂರು ನಗರ ಜಿಲ್ಲೆ, ಹೆಗಡೆ ಕಲ್ಚರಲ್ ಮತ್ತು ಸೋಷಿಯಲ್ ಅಕಾಡೆಮಿ ಮತ್ತು ಯೂತ್ ಕ್ಲಬ್‍ನ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ರಾಜೀವ್‍ಗಾಂಧಿ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ಗಣ್ಯರಿಗೆ ನೀಡಿ ಗೌರವಿಸಲಾಗುವುದು. ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್‍ಕುಮಾರ್ ಎಸ್.ಹೊಸಮನಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜ ಸೇವಕ ಮಹೇಂದ್ರ ಮುನ್ನೋತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ನಟ ಶಂಕರ್ ಭಟ್, ಶ್ರೀ ಸಾಯಿ ಸಂಜೀವಿನಿ ಫೌಂಡೇಶನ್ ಅಧ್ಯಕ್ಷ ಪಿ.ಕೆ.ಗಣಪತಿ, ಸಮಾಜ ಸೇವಕರಾದ ಚಿಕ್ಕಹೆಜ್ಜಾಜಿ ಮಹಾದೇವ್, ಬಿ.ಆರ್.ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ