ಕರಡಿನಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡುವುದು ಅನಿವಾರ್ಯ

ಬೆಂಗಳೂರು, ಆ.19-ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ನೀತಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಲಹೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ಫಯಾಜ್ ದೊಡ್ಡಮನೆ, ಹೊಸ ಶಿಕ್ಷಣ ನೀತಿ ಕರಡಿನಲ್ಲಿ ಉತ್ತಮ ಉದ್ದೇಶಗಳಿದ್ದರೂ ಅದರ ಅನೇಕ ಸಲಹೆಗಳ ಬಗ್ಗೆ ತೀವ್ರವಾದ ಕಳವಳಗಳಿವೆ. ಕರಡು ದೇಶದ ಒಕ್ಕೂಟ ಸ್ವರೂಪಕ್ಕೆ ಹಾನಿಯುಂಟು ಮಾಡಲಿದೆ. ಕರುಡು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮುಕ್ತ ಮಾರುಕಟ್ಟೆ ನೀತಿಯನ್ನು ಪ್ರಸ್ತಾಪಿಸುತ್ತದೆ. ಅದು ಶಿಕ್ಷಣದ ಸಾಂಸ್ಥಿಕರಣಕ್ಕೆ ಕಾರಣವಾಗುತ್ತದೆ ಮತ್ತು ಇದು ವೈವಿಧ್ಯಮಯ ಸಂಸ್ಕ್ರತಿಯ ಬದಲಿಗೆ ಒಂದು ಸಂಸ್ಕøತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತದೆ ಎಂದರು.

ಕರಡಿನಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡುವುದು ಅನಿವಾರ್ಯವಾಗಿದೆ ಎಂದ ಅವರು ಮಕ್ಕಳಲ್ಲಿ ಸಾಮಾಜಿಕ ಬದ್ಧತೆ ಮತ್ತು ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಪಠ್ಯಕ್ರಮವನ್ನು ಪರಿಗಣಿಸಬೇಕು.ನಿರ್ದಿಷ್ಟ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳ ಲಭ್ಯತೆ ಮತ್ತು ಪ್ರವೇಶವನ್ನು ಖಚಿತಪಡಿಸಬೇಕು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯವನ್ನು ನೀಡಬೇಕು. ಅಲ್ಪಸಂಖ್ಯಾತ ಕೇಂದ್ರೀಕೃತ ಸ್ಥಳಗಳಲ್ಲಿ ಹೆಚ್ಚಿನ ಸಂಸ್ಥೆಗಳೊಂದಿಗೆ ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವಂತೆ ಸೇರಿದಂತೆ ಕರಡಿನಲ್ಲಿ ಕೆಲವು ತಿದ್ದುಪಡಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ