ಪಿ.ಚಿದಂಬರಂರವರ ಬಂಧನ-ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಬೆಂಗಳೂರು, ಆ.22- ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ಬಂಧನ ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಪರಾಕಾಷ್ಟೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.

ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಚಿದಂಬರಂ, ರಾತ್ರೋರಾತ್ರಿ ಪಲಾಯನ ಮಾಡುವ ಅವಕಾಶ ಇರಲಿಲ್ಲ. ಕಾಂಗ್ರೆಸ್ ಪಕ್ಷದ ಸುದ್ದಿಗೋಷ್ಠಿಯಲ್ಲಿ ಈ ರಾಷ್ಟ್ರದಲ್ಲಿ ಸ್ವಾತಂತ್ರ್ಯದ ಮೌಲ್ಯಗಳು ಉಳಿಯಬೇಕೆಂದು ಚಿದಂಬರಂ ಹೇಳಿದ ಕೆಲವೇ ನಿಮಿಷಗಳಲ್ಲಿ ನಾಟಕೀಯವಾಗಿ ಬಂಧನ ಮಾಡುವ ಮೂಲಕ ಸಿಬಿಐ ಕೇಂದ್ರ ಸರಕಾರದ ಸೂಚನೆಗಳನ್ನು ಪಾಲಿಸಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ ಖಾಯ ಆಗಿ ಅಧಿಕಾರದಲ್ಲಿ ಉಳಿಯುವ ಕನಸು ಕಾಣುತ್ತಿದೆ.

ಇಂತಹ ಬಂಧನಗಳ ಮೂಲಕ ಪ್ರತಿಪಕ್ಷಗಳ ಹಣಿಯುವ ಬಿಜೆಪಿ ಪ್ರಯತ್ನಕ್ಕೆ ಪ್ರಜಾಪೃಭುತ್ವದ ಮೌಲ್ಯಗಳೇ ಸಂದರ್ಭಕ್ಕೆ ಅನುಗುಣವಾಗಿ ಉತ್ತರ ನೀಡಲಿವೆ. ಅರ್ಧ ರಾತ್ರಿಯ ಅಕ್ರಮ ಬಂಧನವನ್ನು ನಾವು ಈ ಮೂಲಕ ಖಂಡಿಸುತ್ತೇವೆ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ