ಡಿಕೆಶಿಗೆ ಗೌರಿ-ಗಣೇಶ ಹಬ್ಬವಿಲ್ಲ: ನಾಳೆಯೂ ನಡೆಯಲಿದೆ ಇಡಿ ವಿಚಾರಣೆ

ಹೊಸದಿಲ್ಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನಿನ್ನೆ ರಾತ್ರಿವರೆಗೂ ನಡೆದ ವಿಚಾರಣೆ ಬಳಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಗೌರಿ-ಗಣೇಶ ಹಬ್ಬದ ದಿನವಾದ ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದಾರೆ.

ಶುಕ್ರವಾರ ಸಂಜೆಯಿಂದ ವಿಚಾರಣೆಗೆ ಒಳಗಾಗಿರುವ ಡಿಕೆ ಶಿವಕುಮಾರ್ ಸೋಮವಾರ ಹಬ್ಬ ಇರುವುದರಿಂದ ಮಂಗಳವಾರ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಆದರೆ ಈ ಮನವಿಯನ್ನು ಇಡಿ ಅಧಿಕಾರಿಗಳು ತಿರಸ್ಕರಿಸಿದ್ದು, ಸೋಮವಾರವೇ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ