ಕೇಂದ್ರದಿಂದ ಕಾಂಗ್ರೆಸ್ ನಾಯಕರನ್ನು ಬ್ಲಾಕ್‍ಮೇಲ್ ಮಾಡುವ ಪ್ರಯತ್ನ

ಬೆಂಗಳೂರು,ಸೆ.4-ಕೇಂದ್ರ ಸರ್ಕಾರ ಸಿಬಿಐ, ಜಾರಿನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನು ಬ್ಲಾಕ್‍ಮೇಲ್ ಮಾಡುವ ಪ್ರಯತ್ನ ನಡೆಸುತ್ತಿದ್ದು ಅದನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಮುಂದಿನ ಹೋರಾಟ ನಡೆಸಲು ಕಾಂಗ್ರೆಸ್‍ನ ಹಿರಿಯರ ನಾಯಕರ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರದ ಮಾಜಿ ಸಚಿವ ಚಿದಂಬರಂ ಅವರ ಬಂಧನದ ಕುರಿತು ಮುಂದಿನ ದಿನಗಳಲ್ಲಿ ಹೋರಾಟ ಕುರಿತು ಗಂಭೀರ ಚರ್ಚೆ ನಡೆಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ