ನವದೆಹಲಿ: ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಮೂಲಗಳಿಂದ ಕೇಳಿ ಬರುತ್ತಿವೆ. ಕಾಶ್ಮೀರಕ್ಕೆ 370ನೇ ವಿಧಿಯ ಅನ್ವಯ ನೀಡಲಾಗಿದ್ದ ವಿಶೇಷ ಸವಲತ್ತನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದ ನಂತರ ಭಾರತ – ಪಾಕಿಸ್ತಾನದ ನಡುವಿನ ಕಂದಕ ಇನ್ನಷ್ಟು ಹಿರಿದಾಗಿದೆ. ಈ ಕಾರಣಕ್ಕಾಗಿಯೇ ಪಾಕಿಸ್ತಾನ ಮಸೂದ್ನನ್ನು ಬಂಧಮುಕ್ತ ಗೊಳಿಸಿದೆ ಎನ್ನಲಾಗಿದೆ.
ಮಸೂದ್ ಅಜರ್ನನ್ನು 2019ರ ಮೇ ತಿಂಗಳಲ್ಲಿ ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯಲ್ಲಿ ಘೋಷಿಸಲಾಗಿತ್ತು. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಜತೆ ಉತ್ತಮ ಸಂಬಂಧ ವೃದ್ಧಿಪಡಿಸುವ ನಿಟ್ಟಿನಲ್ಲಿ ಉಗ್ರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಪಾಕಿಸ್ತಾನ ಕ್ರಮ ತೆಗೆದುಕೊಳ್ಳುತ್ತಿದೆ ಎಂದಿದ್ದರು. ಆದರೆ ಈಗ ಸದ್ದಿಲ್ಲದೇ ಅಜರ್ನನ್ನು ಬಿಡುಗಡೆ ಮಾಡಿರುವುದರ ಹಿಂದೆ ಹಲವು ಅನುಮಾನಗಳು ಸೃಷ್ಟಿಯಾಗಿವೆ.
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭಾರತದಲ್ಲಿ ಮತ್ತೊಂದು ಉಗ್ರ ಚಟುವಟಿಕೆ ನಡೆಸಲು ಪಾಕಿಸ್ತಾನ ಹುನ್ನಾರ ಮಾಡುತ್ತಿದ್ದು, ಅದರ ಭಾಗವಾಗಿ ಮಸೂದ್ ಬಿಡುಗಡೆ ಮಾಡಲಾಗಿದೆ.
ಇತ್ತೀಚೆಗಷ್ಟೇ ಭಾರತೀಯ ನೌಕಾದಳ ಗುಪ್ತಚರ ಮಾಹಿತಿಯೊಂದನ್ನು ಬಹಿರಂಗಪಡಿಸಿತ್ತು. ಜೈಷ್-ಎ-ಮೊಹಮ್ಮದ್ ಭಾರತದ ಮೇಲೆ ದಾಳಿ ನಡೆಸಲು ಕೆಲ ಉಗ್ರರಿಗೆ ‘ಅಂಡರ್ ವಾಟರ್’ ತರಬೇತಿ ನೀಡುತ್ತಿದೆ ಎಂದು ನೌಕಾದಳ ಹೇಳಿತ್ತು. ಈ ಬಗ್ಗೆ ಮಾತನಾಡಿದ್ದ ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್, ಕರಾವಳಿ ರಕ್ಷಣಾ ಪಡೆಗಳು ಯಾವುದೇ ಉಗ್ರರನ್ನು ಭಾರತದೊಳಗೆ ನುಸುಳಲು ಬಿಡುವುದಿಲ್ಲ. ಸೂಕ್ತ ಕ್ರಮ ಈಗಾಗಲೇ ತೆಗೆದುಕೊಂಡಿದ್ದೇವೆ ಎಂದಿದ್ದರು.
ಇತ್ತೀಚೆಗಷ್ಟೇ ಭಾರತೀಯ ನೌಕಾದಳ ಗುಪ್ತಚರ ಮಾಹಿತಿಯೊಂದನ್ನು ಬಹಿರಂಗಪಡಿಸಿತ್ತು. ಜೈಷ್-ಎ-ಮೊಹಮ್ಮದ್ ಭಾರತದ ಮೇಲೆ ದಾಳಿ ನಡೆಸಲು ಕೆಲ ಉಗ್ರರಿಗೆ ‘ಅಂಡರ್ ವಾಟರ್’ ತರಬೇತಿ ನೀಡುತ್ತಿದೆ ಎಂದು ನೌಕಾದಳ ಹೇಳಿತ್ತು. ಈ ಬಗ್ಗೆ ಮಾತನಾಡಿದ್ದ ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್, ಕರಾವಳಿ ರಕ್ಷಣಾ ಪಡೆಗಳು ಯಾವುದೇ ಉಗ್ರರನ್ನು ಭಾರತದೊಳಗೆ ನುಸುಳಲು ಬಿಡುವುದಿಲ್ಲ. ಸೂಕ್ತ ಕ್ರಮ ಈಗಾಗಲೇ ತೆಗೆದುಕೊಂಡಿದ್ದೇವೆ ಎಂದಿದ್ದರು.