ಮಾಜಿ ಪ್ರಧಾನಿಯಾಗಿರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು,ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿನಿರ್ದೇಶನಾಲಯದ(ಇಡಿ) ಅಧಿಕಾರಿಗಳಿಗೆ ಅಸಹಕಾರ ತೋರಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಕರೆದ ದಿನವೇ ಅವರ ಕಚೇರಿಗೆ ಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ.ಪಿತೃ ಪಕ್ಷದಲ್ಲಿ ಪಾಲ್ಗೊಳ್ಳಲು ಇಡಿ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಲಿಲ್ಲ. ಈ ವಿಚಾರದಲ್ಲಿ ನಿಷ್ಕರುಣೆಯಿಂದ ನಡೆದುಕೊಂಡಿದೆ ಎಂದರು.
ನಿನ್ನೆ ಶಿವಕುಮಾರ್ ಪರವಾಗಿ ನಗರದಲ್ಲಿ ನಡೆದ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಾಲ್ಗೊಂಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್ ಅವರ ತಾಯಿಯನ್ನೇ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.ಈ ವಿಚಾರದಲ್ಲಿ ಅಪಾರ್ಥ ಹುಡುಕುವುದು ಬೇಡ.ತಾವು ಮಾಜಿ ಪ್ರಧಾನಿಯಾಗಿರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ. ಆದರೆ ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಬೆಂಬಲ ನೀಡಿದ್ದರು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ