ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆ ಸೆ.26ಕ್ಕೆ ಮುಂದೂಡಿಕೆ

ಬೆಂಗಳೂರು,ಸೆ.17- ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ಮುಖಂಡ ಶರಣಗೌಡ ಕಂದಕೂರ, ಬಿ.ಎಸ್.ಯಡಿಯೂರಪ್ಪನವರ ಮೇಲೆ ಮಾಡಿದ ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆಯನ್ನು ಕಲಬುರಗಿ ಹೈ ಕೋರ್ಟ್ ಸೆ.26ಕ್ಕೆ ಮುಂದೂಡಿದೆ.

ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಶರಣಗೌಡ ಕಂದಕೂರ ಅವರು, ಯಡಿಯೂರಪ್ಪ ಅವರ ಜೊತೆ ದೂರವಾಣಿಯಲ್ಲಿ ನಡೆಸಿದ್ದಾರೆನ್ನಲಾದ ಸಂಭಾಷಣೆ ಕುರಿತ ಆಡಿಯೋವನ್ನು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡುವ ಮುನ್ನ ಬಿಡುಗಡೆ ಮಾಡಿದ್ದರು.

ಈ ಸಂಬಂಧ ಶರಣಗೌಡ ಕಂದಕೂರ ಅವರು ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೂರು ಸಲ್ಲಿಸಿದ್ದರು.ದೂರಿನ ಅನ್ವಯ ಎಫ್‍ಐಆರ್ ದಾಖಲಾಗಿತ್ತು. ಯಡಿಯೂರಪ್ಪನವರು ಮಧ್ಯಂತರ ತಡೆಯಾಜ್ಞೆ ಪಡೆದಿದ್ದರು.ತಡೆಯಾಜ್ಞೆ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ