ಇಡಿ ಸಮನ್ಸ್ ನೀಡಿರುವ ಕಾರಣ ಗೊತ್ತಿಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಸೆ.18- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ವ್ಯವಹಾರವಿಲ್ಲ. ಆದರೂ ಇಡಿ ಸಮನ್ಸ್ ನೀಡಿರುವ ಕಾರಣ ಗೊತ್ತಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ 180 ಜನರಿಗೆ ಇಡಿ ಸಮನ್ಸ್ ನೀಡಿದೆ.ಅದರಲ್ಲಿ ನನ್ನನ್ನೂ ಕರೆದಿದ್ದಾರೆ.ಅವರು 14ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೊಟ್ಟಿದ್ದರು. ಆದರೆ ನಾನು 14ರಂದು ಬರಲು ಸಾಧ್ಯವಿಲ್ಲವೆಂದು ಹೇಳಿದ್ದೆ. ಹಾಗಾಗಿ ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದರು. ನಾನು ಬೆಂಗಳೂರಿನಲ್ಲಿ ವಿಚಾರಣೆಗೆ ಬರುತ್ತೇನೆ. ಇಲ್ಲವೇ ಬೆಳಗಾವಿಯಲ್ಲೇ ವಿಚಾರಣೆ ನಡೆಸಿ ಎಂದು ಕೇಳಿಕೊಂಡಿದ್ದೇನೆ. ಆದರೆ ಇನ್ನೂ ಇಡಿಯಿಂದ ಉತ್ತರ ಬಂದಿಲ್ಲ.ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ. ಹಾಗಿದ್ದರೂ ಯಾಕೆ ಕರೆದಿದ್ದಾರೆ ಎನ್ನುವುದು ವಿಚಾರಣೆಗೆ ಹಾಜರಾದ ಬಳಿಕ ಗೊತ್ತಾಗಬೇಕಷ್ಟೇ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ