ರೋಷನ್ ಬೇಗ್‍ರವರಿಂದ ಕ್ಷೇತ್ರದ ಅಭಿವೃದ್ದಿಯಾಗಿಲ್ಲ-ಅಬ್ದುಲ್ ಅಜೀಜ್

ಬೆಂಗಳೂರು,ಸೆ.19- ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ. ಒಂದು ವೇಳೆ ಅವಕಾಶ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಲಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಅಜೀಜ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಈಗಾಗಲೇ ಶಿವಾಜಿನಗರ ಕ್ಷೇತ್ರದ ಹಲವಾರು ಭಾಗಗಳಿಗೆ ಭೇಟಿನೀಡಿದ್ದೇನೆ. ಪಕ್ಷ ಸಂಘಟನೆಗೆ ದುಡಿಯುತ್ತಿದ್ದೇನೆ. ನನಗೆ ಹಲವಾರು ಬಾರಿ ಟಿಕೆಟ್ ತಪ್ಪಿದೆ. ಈ ಬಾರಿ ಅವಕಾಶ ಕೊಟ್ಟರೆ ಗೆದ್ದು ತೋರಿಸುತ್ತೇನೆ ಎಂದಿದ್ದಾರೆ.

ಈ ಮೊದಲು ಶಾಸಕರಾಗಿದ್ದ ರೋಷನ್ ಬೇಗ್ ಅವರು ಕ್ಷೇತ್ರದ ಅಭಿವೃದ್ದಿ ಮಾಡಿಲ್ಲ ಎಂದು ಅಬ್ದುಲ್ ಅಜೀಜ್ ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ