ಶಹಜಾನಪುರ್ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ

ಹೊಸದಿಲ್ಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರ ಪ್ರದೇಶದ ಎಸ್ಐಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸಹರಾನ್ಪುರ್ ನಗರದಲ್ಲಿರುವ ಆಶ್ರಮದಿಂದ ಚಿನ್ಮಯಾನಂದ ಅವರನ್ನು ಬಂಧಿಸಿದ ಪೊಲೀಸರು ಜಿಲ್ಲಾಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಶಹಜಾನ್​ಪುರದ ಸಂತ್ರಸ್ತ ಯುವತಿಯು ತನ್ನ ಮೇಲೆ ಸ್ವಾಮಿ ಚಿನ್ಮಯಾನಂದ ನಡೆಸಿದ ಲೈಂಗಿಕ ದೌರ್ಜನ್ಯ ಬಗ್ಗೆ ಮ್ಯಾಸ್ಟ್ರೇಟ್ ಬಳಿ ಹೇಳಿಕೆ ದಾಖಲಿಸಿದ್ದರು. ಚಿನ್ಮಯಾನಂದ ಅವರನ್ನು ಕೂಡಲೇ ಬಂಧಿಸದಿದ್ದರೆ ಬೆಂಕಿ ಹಚ್ಚಿಕೊಂಡು ಸಾಯುವುದಾಗಿಯೂ ಆ ಯುವತಿ ಬೆದರಿಕೆ ಹಾಕಿದ್ದರು.

ಸ್ವಾಮಿ ಚಿನ್ಮಯಾನಂದ ಅವರು ಬ್ಲ್ಯಾಕ್ ಮೇಲ್ ಮಾಡಿ ಒಂದು ವರ್ಷ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂಬುದು ಯುವತಿ ಮಾಡಿರುವ ಆರೋಪವಾಗಿದೆ. ಸ್ವಾಮಿ ಚಿನ್ಮಯಾನಂದ ಅವರ ಆಶ್ರಮಕ್ಕೆ ಸೇರಿದ ಹಾಸ್ಟೆಲ್​ನಲ್ಲಿದ್ದ ಯುವತಿ ಬಾಥ್ ರೂಮಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ಆ ವಿಡಿಯೋ ಕ್ಲಿಪಿಂಗ್​ಗಳನ್ನ ಇಟ್ಟುಕೊಂಡು ಚಿನ್ಮಯಾನಂದರು ಆ ಯುವತಿಗೆ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಎಸಗುತ್ತಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ