ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು

ಮೈಸೂರು, ಸೆ.20-ಪ್ರತಿಯೊಬ್ಬರು ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದರು.

ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿ ಮಾತನಾಡಿದರು.

ನಗರದ 65 ವಾರ್ಡ್‍ಗಳಲ್ಲಿಯೂ ಇಂದಿನಿಂದ ಸ್ವಚ್ಛತಾ ಅಭಿಯಾನವನ್ನು 5 ದಿನಗಳ ಕಾಲ ಸಮರೋಪಾದಿಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದರೊಂದಿಗೆ ನಗರದ ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ ಎಂದರು.

ಸ್ವಚ್ಛತಾ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೂಡಾ ನೀರು ಸರಬರಾಜು ಮಂಡಳಿ, ಕೊಳಚೆ ನಿರ್ಮೂಲನಾ ಮಂಡಳಿ, ಗೃಹ ನಿರ್ಮಾಣ ಮಂಡಳಿ ನೇತೃತ್ವದಲ್ಲಿ ಈ ಸ್ವಚ್ಛತಾ ಕಾರ್ಯ ನಡೆಯಲಿದೆ. ನಗರದ ಸ್ವಚ್ಛತಾ ಕಾರ್ಯಕ್ಕೆ ಗುತ್ತಿಗೆದಾರರು ಕೈಜೋಡಿಸಿರುವುದು ಶ್ಲಾಘನೀಯ ಎಂದರು.

ಸಚಿವರೊಂದಿಗೆ ಶಾಸಕ ನಾಗೇಂದ್ರ, ಮೇಯರ್ ಪುಷ್ಪಲತಾ, ಜಗನ್ನಾಥ್ ಪಾಲಿಕೆ ಆಯುಕ್ತ ಗುರುದತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ