ರೈತರ ಆತ್ಮಹತ್ಯೆಗೆ ಪ್ರಧಾನಿವರೇ ನೇರ ಕಾರಣ

ಬೆಂಗಳೂರು, ಅ.3-  ನೆರೆಗೆ ಸ್ಪಂದಿಸದೆ ಪರಿಹಾರ ಕೊಡದೆ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆತ್ಮಹತ್ಯೆಗೆ ನೇರ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಟ್ವಿಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಪ್ರವಾಹದಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ಸಿಗದೆ ಕಳಸಾ ಸಮೀಪದ ಎಸ್.ಕೆ.ಮೇಗಲ್ ಗ್ರಾಮದ ರೈತ ಚಂದ್ರೇಗೌಡ ನಿನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಈ ಆತ್ಮಹತ್ಯೆಗೆ ನರೇಂದ್ರ ಮೋದಿಯವರೇ ಕಾರಣ ಎಂದು ಸೂಚಿಸಿದೆ.

ಪರಿಹಾರ ನೀಡದೇ ಇರುವುದು ಸಾವಿಗೆ ಕಾರಣವಾಗಿದೆ.ಈ ಆತ್ಮಹತ್ಯೆಯ ಹೊಣೆಗಾರಿಕೆಯನ್ನು ಪ್ರಧಾನಿಯವರು ಹೊರಬೇಕು ಎಂದು ಒತ್ತಾಯಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಕಳೆದುಕೊಂಡಿದ್ದಾರೆ.ತಕ್ಷಣವೇ ತಂತಿಯ ಮೇಲಿಂದ ಕೆಳಗಿಳಿದು ಮನೆಗೆ ನಡೆಯಬೇಕು ಎಂದು ಹೇಳಿದೆ.

ಯಡಿಯೂರಪ್ಪನವರು ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದ್ದಾರೆ.ರೈತರಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ