ನೆರೆ ಪೀಡಿತ ಜನರಿಗೆ ಸಂಸದರು ಧೈರ್ಯ ತುಂಬಿಲ್ಲ

ಬೆಂಗಳೂರು, ಅ.7- ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಧೈರ್ಯ ತುಂಬುವ ಬದಲು ಸಂಸದರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳ ಬದುಕು ಡೋಲಾಯಮಾನವಾಗಿದೆ.ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸದರು ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡುವ ಬದಲು ಕ್ಷೇತ್ರದಿಂದ ಕಾಲ್ಕಿತ್ತಿರುವುದು ಅವರ ರೈತಪರ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ಸಂಸದೆ ಶೋಭಾ ಅವರ ಹೆಸರನ್ನು ಪ್ರಸ್ತಾಪಿಸದೆ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಜನರು ನೆರೆ ಪರಿಹಾರ ಸಿಗುತ್ತಿಲ್ಲ ಎಂದು ಕಂಗಾಲಾಗಿದ್ದಾರೆ. ಅಲ್ಲದೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸದರು ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ