ಆತ್ಮಹತ್ಯೆಗೆ ಯತ್ನಿಸಿದ ಶ್ರೀರಂಗಪಟ್ಟಣ ಡಿವೈಎಸ್​ಪಿ ಯೋಗಾನಂದ್; ಮೈಸೂರು ಆಸ್ಪತ್ರೆಗೆ ದಾಖಲು

ಮಂಡ್ಯ: ಶ್ರೀರಂಗಪಟ್ಟಣ ಡಿವೈಎಸ್​ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ತಾಲೂಕು ಬಾಬುರಾಯನಕೊಪ್ಪಲಲ್ಲಿ ಘಟನೆ ನಡೆದಿದೆ. ಕೈ ಕಾಲಿನ ನರ ಕೊಯ್ದುಕೊಂಡು ಯೋಗಾನಂದ್​ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಮನೆಯಲ್ಲಿಯೇ ಈ ಘಟನೆ ನಡೆದಿದೆ.  ಈ ವೇಳೆ ತೀವ್ರ ರಕ್ತಸ್ರಾವ ಉಂಟಾಗಿದೆ. ತಕ್ಷಣಕ್ಕೆ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯೋಗಾನಂದ್​ ಆತ್ಮಹತ್ಯೆ ಪ್ರಯತ್ನ ಮಾಡಿರುವ ವಿಚಾರ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಕೆಲಸದ ಒತ್ತಡದ ಮತ್ತು ಮರೆಗುಳಿ ಸಮಸ್ಯೆಯಿಂದ ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ಸದ್ಯ, ಯೋಗಾನಂದ್​ ಆರೋಗ್ಯ ಗಂಭೀರವಾಗಿದೆ. ಅವರಿಗೆ ವೈದ್ಯರು ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ