ಇಂದು ಹುಟ್ಟೂರಲ್ಲಿ ಜಿ.ಪರಮೇಶ್ವರ್ ಪಿಎ ರಮೇಶ್​ ಅಂತ್ಯಕ್ರಿಯೆ; ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ಐಟಿ ವಿಚಾರಣೆಗೆ ಹೆದರಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಡಿಸಿಎಂ ಪರಮೇಶ್ವರ್​ ಪಿಎ ರಮೇಶ್​ ಅವರ ಅಂತ್ಯಕ್ರಿಯೆ ಇಂದು ಹುಟ್ಟೂರಿನಲ್ಲಿ ನಡೆಯಲಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಮೇಶ್​ ಸಾವಿಗೆ ಐಟಿ ಕಿರುಕುಳವೇ ಕಾರಣವಾ ಅಥವಾ ಬೇರೆ ಕಾರಣ ಇದೆಯಾ ಎಂಬುದು ಮಾತ್ರ ನಿಗೂಢವಾಗಿದೆ. ಹೀಗಾಗಿ ಪರಮೇಶ್ವರ್​ ಸಾವಿನ ಸುತ್ತ ನೂರೆಂಟು ಅನುಮಾನಗಳ ಹುತ್ತ ಬೆಳೆದಿದೆ. ಜೊತೆಗೆ ರಮೇಶ್​ ಕುಟುಂಬಸ್ಥರು ಈ ಸಂಬಂಧ ದೂರು ಕೂಡ ದಾಖಲಿಸಿದ್ಧಾರೆ. ಆ ದೂರಿನ ತನಿಖೆ ನಿಜಕ್ಕೂ ಆಗುತ್ತಾ ಎಂಬ ಶಂಕೆ ಮೂಡಿದೆ.

ಆತ್ಮಹತ್ಯೆ ಹಾಗೂ ಅನುಮಾನಗಳ ಮಧ್ಯೆಯೇ ಕುಟುಂಬಸ್ಥರು ರಮೇಶ್​ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ಧಾರೆ. ಹುಟ್ಟೂರಾದ ರಾಮನಗರ ಜಿಲ್ಲೆಯ ಮೆಳೇಹಳ್ಳಿದೊಡ್ಡಿಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಮೇಶ್​ ಅಂತ್ಯಕ್ರಿಯೆ ನಡೆಯಲಿದೆ. ಒಕ್ಕಲಿಗರ ಸಂಪ್ರದಾಯದಂತೆ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ರಮೇಶ್ ಅವರ ಜಮೀನಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.
ನಿನ್ನೆ ಬೆಂಗಳೂರು ವಿವಿಯ ಕ್ಯಾಂಪಸ್​ನಲ್ಲಿ ಪರಮೇಶ್ವರ್ ಪಿಎ ರಮೇಶ್​ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಐಟಿ ವಿಚಾರಣೆಗೆ ಹೆದರಿ ಸಾಯುವ ನಿರ್ಧಾರ ಮಾಡಿದ್ಧಾರೆ ಎಂದು ತಿಳಿದು ಬಂದಿತ್ತು. ರಮೇಶ್​ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್​ ಮುಖಂಡರು ಆರೋಪಿಸಿದ್ದರು. ಪ್ರಕರಣ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ