ಅನರ್ಹ ಶಾಸಕರ ವಿಚಾರಣೆ ನಾಳೆಗೆ ಮುಂದೂಡಿಕೆ

ನವದೆಹಲಿ, ಅ.22- ತೀವ್ರ ಕುತೂಹಲ ಕೆರಳಿಸಿರುವ 17 ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.

ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು,  ನಾಳೆಯಿಂದ ವಿಚಾರಣೆ ಪ್ರಾರಂಭವಾಗಲಿದೆ.

ನಿನ್ನೆಯಷ್ಟೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ಒಂದು ವಾರ ಕಾಲಾವಕಾಶ ನೀಡಬೇಕೆಂದು ಸುಪ್ರೀಂಕೊರ್ಟ್‍ಗೆ ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಒಂದು ದಿನ ಕಾಲಾವಕಾಶ ನೀಡಿ ಇಂದಿಗೆ  ವಿಚಾರಣೆಯನ್ನು ಮುಂದೂಡಿತ್ತು.

ನಿನ್ನೆ ಮಧ್ಯಾಹ್ನ ಚುನಾವಣಾ ಆಯೋಗ ಸುಪ್ರೀಂಕೋರ್ಟ್‍ಗೆ ಇಂದಿನಿಂದಲೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೊರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.ಇಂದು ವಿಚಾರಣೆ ಪ್ರಾರಂಭಿಸಿದ ತ್ರಿಸದಸ್ಯ ಪೀಠ ನಾಳೆಗೆ ವಿಚಾರಣೆಯನ್ನು ಮುಂದೂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ