ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ಉತ್ತರ ಕೊಡುತ್ತಾರೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಅ.25-ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಸಂಕಷ್ಟ ಉಂಟಾದಾಗ ಜನರೇ ತಕ್ಕ  ಉತ್ತರ ಕೊಡುತ್ತಾರೆ ಎಂಬುದಕ್ಕೆ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಯ ಫಲಿತಾಂಶವೇ ನಿದರ್ಶನ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಾದೇಶಿಕ ಪಕ್ಷಗಳನ್ನು ದಮನ ಮಾಡುವ ಮತ್ತು ವಿರೋಧ ಪಕ್ಷಗಳ ಶಕ್ತಿ ಕುಂದಿಸುವ ಪ್ರಯತ್ನಕ್ಕೆ ಜನ ಬೆಂಬಲಿಸುವುದಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ವಾಸ್ತವಾಂಶಗಳನ್ನೇ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಕುಳಿತು ಏನು ಮಾಡಿದರು, ಲಂಡನ್,, ಮಲೇಷ್ಯಾಕ್ಕೆ ಹೋಗಿ ಏನು ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರು ನಮ್ಮ ಬಾಗಿಲಿಗೆ ಬಂದು ಸರ್ಕಾರ ರಚಿಸುವಂತೆ ಮನವಿ ಮಾಡಿದರು.ಕೊನೆಗೆ ಶಿಕ್ಷೆಯನ್ನು ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ