ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ರವರಿಗೆವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ಬೆಂಗಳೂರು,ಅ.25-ನಾಳೆ ರಾಜ್ಯಕ್ಕೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಕೇಶವ ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ಕೆಪಿಸಿಸಿ ಕಚೇರಿಗೆ ಬರಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೆಲವು ರಾಜಕೀಯ ನಾಯಕರ ವೈಯಕ್ತಿಕ ದ್ವೇಷದಿಂದ ಕಳೆದ  ಕೆಲವು ವಾರಗಳಿಂದ ದೆಹಲಿಯ ತಿಹಾರ್ ಜೈಲಿನಲ್ಲಿ  ಸೆರೆವಾಸ ಅನುಭವಿಸುತ್ತಿದ್ದು ಇದರಿಂದ ಮುಕ್ತಿಗೊಂಡು ನಾಳೆ ರಾಜ್ಯಕ್ಕೆ ಅಗಮಿಸಲಿದ್ದಾರೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ನಮ್ಮ ನಾಯಕನನ್ನು ಕೆಣಕಿದವರಿಗ ಈ  ಬೆಳವಣಿಗೆ ತಿರುಗುಬಾಣವಾಗಿ ಮಾರ್ಪಡಲಿದೆ. ನಾವೆಲ್ಲರೂ ನಮ್ಮ ಬಂಡೆಯಂತಹ ನಾಯಕನ ಜೊತೆ ನಿಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗ, ಕಾಂಗ್ರೆಸ್  ಹಾಗೂ ಜೆಡಿಎಸ್  ಪಕ್ಷದ ಪ್ರಮುಖ ಮುಖಂಡರುಗಳು ಮತ್ತು ರಾಮನಗರ, ಕನಕಪುರ ಬೆಳಗಾವಿ, ಬಳ್ಳಾರಿ, ಮೈಸೂರು ಹೈದರಾಬಾದ್ ಕರ್ನಾಟಕದಿಂದಲೂ ಅಭಿಮಾನಿಗಳು ಬರಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ