ನಮ್ಮದು ಗಟ್ಟಿ ಸರ್ಕಾರ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು,ನ.೪-ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆಡಿಯೋ ರಾಜಕೀಯದ ಬೆದರಿಕೆಗೆ ಹೆದರುವುದಿಲ್ಲ. ನಮ್ಮದು ಗಟ್ಟಿ ಸರ್ಕಾರ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿಯೂ ದಾಖಲೆಗಳಿವೆ. ನಮ್ಮ ತಂಟೆಗೆ ಬರಬೇಡಿ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.

ಲೋಕಸಭೆ ಚುನಾವಣೆ ನಂತರ ಮೈತ್ರಿ ಸರ್ಕಾರ ಬೀಳಿಸುತ್ತೇವೆ ಎಂದು ನೀವು ಮಾತನಾಡಿರುವುದು  ಗೊತ್ತಿದೆ. ವಿರೋಧ ಪಕ್ಷದ ನಾಯಕರಾಗಿ ಜಾತಿ ಬಗ್ಗೆ ಕೂಡ ಪ್ರಸ್ತಾಪ ಮಾಡಿದ್ದೀರಿ. ಇಂಥ ವಿಚಾರದ ಸುಂದರವಾದ ಆಡಿಯೋ ಇದೆ ಎಂದು ಸಿದ್ದರಾಮಯ್ಯನವರಿಗೆ  ಟಾಂಗ್ ನೀಡಿದರು.

ನಮ್ಮ ಪಕ್ಷದ ಆಂತರಿಕ ವಿಚಾರವನ್ನು ಮುಂದಿಟ್ಟು ಆಡಿಯೋ ರಾಜಕೀಯ ಮಾಡುತ್ತಿದ್ದೀರಿ. ನಾವು ಕಾಗದದ ಹುಲಿಗಳಲ್ಲ. ಗಟ್ಟಿಯಾಗಿದ್ದೇವೆ. ದೇಶದಲ್ಲಿ , ರಾಜ್ಯದಲ್ಲಿ, ಬೆಂಗಳೂರಿನಲ್ಲಿ ನಮ್ಮ ಪಕ್ಷದ ಆಡಳಿತವಿದೆ ಎಂದು ವಾಗ್ದಾಳಿ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ