ವಿಧಾನಸಭೆ ಉಪಚುನಾವಣೆ-10 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆ

ಬೆಂಗಳೂರು,ನ.14-ರಾಜ್ಯ ವಿಧಾನಸಭೆ ಉಪಚುನಾವಣೆ ಹಾಗೂ ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಗೆ -ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

15 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಹಾಗೂ ವಿಧಾನಪರಿಷತ್‍ನ 4 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಶಿವಾಜಿನಗರ- ತನ್ವೀರ್ ಅಹಮ್ಮದ್ ಉಲ್ಲಾ , ಯಶವಂತಪುರ-ಟಿ.ಎನ್.ಜವರಾಯಿಗೌಡ, ಚಿಕ್ಕಬಳ್ಳಾಪುರ- ಕೆ.ಪಿ.ಬಚ್ಚೇಗೌಡ, ವಿಜಯನಗರ ಮಾಜಿ ಸಚಿವ ಎನ್.ಬಿ.ನಬಿ, ಕೆ.ಆರ್.ಪೇಟೆ- ದೇವರಾಜ್, ರಾಣೆಬೆನ್ನೂರು- ಮಲ್ಲಿಕಾರ್ಜುನ ಹಲಗೇರಿ, ಹಿರೇಕೆರೂರು-ಉಜನೆಪ್ಪ ಜೆಟ್ಟಿಯಪ್ಪ ಕೋಡಿಹಳ್ಳಿ, ಯಲ್ಲಾಪುರ-ಚೈತ್ರಾಗೌಡ, ಕೆ.ಆರ್.ಪುರ ಸಿ.ಕೃಷ್ಣಮೂರ್ತಿ, ಹುಣಸೂರು ಸೋಮಶೇಖರ್ ಅವರು ನಮ್ಮ ಪಕ್ಷದ ಅಭ್ಯರ್ಥಿಗಳಾಗಿ- ಸ್ಫರ್ಧಿಸಲಿದ್ದಾರೆ ಎಂದು ತಿಳಿಸಿದರು.

ಹೊಸಕೋಟೆ ಕ್ಷೇತ್ರಕ್ಕೆ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಲಾಗಿದೆ ಎಂದರು.

ತೀವ್ರ ಪೈಪೋಟಿಯಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ನಂತರದಲ್ಲಿ ಪ್ರಕಟಿಸುವುದಾಗಿ ಹೇಳಿದರು.

2020ರ ಜೂನ್ ತಿಂಗಳಿನಲ್ಲಿ ನಡೆಯುವ ವಿಧಾನಪರಿಷತ್‍ನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ವಿಧಾನಪರಿಷತ್ ಸದಸ್ಯ ಆರ್.ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ ಹಾಗೂ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ ಎಂದರು.

ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಭಾರೀ ಪೈಪೋಟಿಯಿದ್ದ ಮಹಾಲಕ್ಷ್ಮಿಲೇಔಟ್ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಅಂತಿಮಗೊಂಡಿಲ್ಲ, ಮಾಜಿ ಉಪಮೇಯರ್ ಭದ್ರೇಗೌಡ, ಕಾಂಗ್ರೆಸ್ ಮುಖಂಡ ಗಿರೀಶ್ ಕೆ.ನಾಶಿ, ಕಾಮಾಕ್ಷಿಪಾಳ್ಯದ ರಾಜಣ್ಣ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಕೊನೆಗಳಿಗೆಯಲ್ಲಿ ಯಾರಿಗೆ ಜೆಡಿಎಸ್ ವರಿಷ್ಠರು ಟಿಕೆಟ್ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ