ನಾನು ಇನ್ನು ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಡಿ.18-ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ ನಾನು ಮುಖ್ಯಮಂತ್ರಿಯಾಗುವುದಿಲ್ಲ. ಬೇರೆಯವರು ಮುಖ್ಯಮಂತ್ರಿಯಾಗಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇನ್ನು ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ. ಪಕ್ಷದ ಕಾರ್ಯಕರ್ತನಾಗಿ ಸಂಘಟನೆಯತ್ತ ಹೆಚ್ಚು ಗಮನಹರಿಸುತ್ತೇನೆ ಎಂದರು.

ಪಕ್ಷ ಬಿಟ್ಟು ಹೋಗುವವರಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆಪರೇಷನ್ ಕಮಲ ಬಿಜೆಪಿಯ ಸಂಸ್ಕøತಿ. ಜನ ಸ್ಥಿರ ಸರ್ಕಾರ ಬೇಕು ಎಂದು ಬಯಸಿದರು. ಬಿಜೆಪಿಗೆ ಅಧಿಕಾರವಿದೆ. ಜನಪರ ಕೆಲಸಗಳನ್ನು ಮಾಡಲಿ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಾವು ಮಾಡುವುದಿಲ್ಲ ಎಂದು ಹೇಳಿದರಲ್ಲದೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಸಣ್ಣತನವನ್ನು ಬಿಜೆಪಿ ಸರ್ಕಾರ ಮಾಡದಿರಲಿ ಎಂದು ಹೇಳಿದರು.

ತಮ್ಮ ಹುಟ್ಟುಹಬ್ಬಕ್ಕೆ ಜಿ.ಟಿ.ದೇವೇಗೌಡ ಹೊರತುಪಡಿಸಿ ಉಳಿದ ಎಲ್ಲ ನಾಯಕರು ಶುಭ ಹಾರೈಸಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ