ಭಾವೋದ್ವೇಗಕ್ಕೆ ಒಳಗಾದ ಜಮೀರ್ ಅಹಮ್ಮದ್ ಖಾನ್

ಬೆಂಗಳೂರು, ಡಿ.20- ನನ್ನ ಪ್ರಾಣ ಹೋದರೂ ಪರವಾಗಿಲ್ಲ ನಾನು ಮಂಗಳೂರಿಗೆ ಹೋಗುತ್ತೇನೆ ಎಂದು ವೈದ್ಯರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂತಹ ನಾಯಕ ದೇಶದಲ್ಲಿ ಬೇರೆ ಯಾರೂ ಇಲ್ಲ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಮಂಗಳೂರು ಹಿಂಸಾಚಾರ ಮತ್ತು ಗೋಲಿಬಾರ್ ಘಟನೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿ ನಡೆಸಿ ಹಲವಾರು ವಿಷಯಗಳನ್ನು ಹಂಚಿಕೊಂಡರು. ತಾವು ಮಂಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಅನಾರೋಗ್ಯದ ವಿಷಯ ಪ್ರಸ್ತಾಪವಾದಾಗ ಭಾವೋದ್ವೇಗಕ್ಕೆ ಒಳಗಾದ ಜಮೀರ್ ಅಹಮ್ಮದ್ ಖಾನ್, ವೈದ್ಯರು ಕರೆ ಮಾಡಿ ನಿಮಗೆ ಕಳೆದ ವಾರವಷ್ಟೇ ಸ್ಟೆಂಟ್ ಅಳವಡಿಸಲಾಗಿದೆ. ವಿಶ್ರಾಂತಿ ಪಡೆಯಬೇಕು. ಹೆಚ್ಚು ಓಡಾಡಬೇಡಿ ಎಂದು ಸೂಚನೆ ನೀಡಿದರು. ಆದರೆ, ಸಿದ್ದರಾಮಯ್ಯ ಅವರು ನನ್ನ ಪ್ರಾಣ ಹೋದರೂ ಪರವಾಗಿಲ್ಲ ನಾನು ಮಂಗಳೂರಿಗೆ ಹೋಗೇ ಹೋಗುತ್ತೇನೆ ಎಂದು ಹೇಳಿದ್ದಾರೆ. ಇಂತಹ ನಾಯಕ ದೇಶದಲ್ಲೇ ಮತ್ತೊಬ್ಬರಿಲ್ಲ . ಹ್ಯಾಟ್ಸ್ ಆಫ್ ಯು ಸರ್ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ