ಪಕ್ಷ ಒಪ್ಪಿದರೆ ರಾಜೀನಾಮೆ ನೀಡಲು ಸಿದ್ಧ: ಡಿಸಿಎಂ ಕಾರಜೋಳ

ವಿಜಯಪುರ: ಪಕ್ಷ ನಿರ್ಣಯ ಕೈಗೊಂಡರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿ, ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿದ ಅವರು, ಪಕ್ಷ ನಿರ್ಣಯ ಕೈಗೊಂಡರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದರು.

ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ಮಾತನಾಡುತ್ತಾರೆ. ನಾನು ಪ್ರವಾಸದಲ್ಲಿ ಇರುವ ಕಾರಣ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ. ನಾವು ಬೆಳೆದಿರುವುದೇ ಪಕ್ಷದಿಂದ. ಪಕ್ಷ ಯಾವುದೇ ನಿರ್ಣಯ ಕೈಗೊಂಡರೂ ಅದಕ್ಕೆ ನಾನು ಬದ್ಧ ಎಂದು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಮಂತ್ರಿಗಳು ಹಾಗೂ ಸಿಎಂ ಯಡಿಯೂರಪ್ಪನವರು ಏನು ನಿರ್ಣಯ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ. ನನಗೆ ಸಚಿವ ಸ್ಥಾನ ಬಿಡು ಎಂದರೆ ಅತ್ಯಂತ ಖುಷಿಯಿಂದ ಬಿಟ್ಟುಕೊಡುತ್ತೇನೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ, ನಾನು ಸಚಿವ ಸ್ಥಾನ ಬಿಡಲು ಸಿದ್ಧ ಎಂದ ಡಿಸಿಎಂ ತಿಳಿಸಿದರು.

ಡಿಸಿಎಂ ಸ್ಥಾನ ಹೆಚ್ಚಳ ಕುರಿತು ಪ್ರತಿಕ್ರಿಯಿಸಿ, ಡಿಸಿಎಂ ಸ್ಥಾನ ಹೆಚ್ಚಾಗಿರುವ ಪರಿಣಾಮ ಜನರಿಗೆ ಯಾವುದೇ ತೊಂದರೆ ಆಗಿಲ್ಲ. ಸಾರ್ವಜನಿಕರ ಜೊತೆ ನಾವೂ ಸಾರ್ವಜನಿಕರು. ಸಾಮಾನ್ಯ ಜನರಿಗೆ ಕೊಡುವ ವ್ಯವಸ್ಥೆ ನಮಗೆ ಕೊಡಿ ಎಂದು ನಾನು ಮೊದಲೇ ಹೇಳಿದ್ದೇನೆ ಎಂದರು. ಬಳಿಕ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಗೂ ಸ್ಥಾನ ಮಾನ ಸಿಗಬೇಕು ಎಂದ ಡಿಸಿಎಂ ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ