ಲಾಕ್‌ಡೌನ್​ನಿಂದ ನಷ್ಟ ಅನುಭವಿಸಿದ ಜನರಿಗೆ 1610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು; ಒಂದೂವರೆ ತಿಂಗಳಿನಿಂದ ಸತತ ಲಾಕ್ಡೌನ್ ಜಾರಿಯಲ್ಲಿದ್ದು, ರಾಜ್ಯದ ಅನೇಕ ವಲಯದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದಾರೆ. ವರ್ಗದ ಜನರನ್ನು ಮತ್ತೆ ಆರ್ಥಿಕವಾಗಿ ಮುನ್ನೆಲೆಗೆ ತರುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಇಂದು 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ಅನ್ನು ಬಿಡುಗಡೆ ಮಾಡಿದ್ದಾರೆ.  ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಿಎಂ ಬಿ.ಎಸ್.‌ ಯಡಿಯೂರಪ್ಪ ಸ್ಥಗಿತವಾಗಿರುವ ರಾಜ್ಯದ ಆರ್ಥಿಕತೆಗೆ ಮತ್ತೆ ಉತ್ತೇಜನ ನೀಡುವ ಮತ್ತು ಸಂಕಷ್ಟಕ್ಕೆ ಒಳಗಾಗಿರುವ ಎಲ್ಲಾ ವರ್ಗದ ಜನರಿಗೆ ಪರಿಹಾರ ನೀಡುವ ಉದ್ದೇಶದಿಂದ 1610 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.

ವಿಶೇಷ ಪ್ಯಾಕೇಜ್ನಲ್ಲಿ ಯಾವ ವರ್ಗಕ್ಕೆ ಎಷ್ಟು ಹಣ?

# ರಾಜ್ಯದಲ್ಲಿರುವ ಸುಮಾರು 2,30,000 ಜನ ಕ್ಷೌರಿಕ ವರ್ಗಕ್ಕೆ ತಲಾ 5,000 ಹಣ ಆರ್ಥಿಕ ನೆರವು.

# 60,000 ಅಗಸರಿಗೆ ಹಾಗೂ 7.75 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5,000 ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ.

# ರಾಜ್ಯದಲ್ಲಿರುವ ನೋಂದಾಯಿತ 18 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಈಗಾಗಲೇ 2,000 ರೂ ಜಮಾ ಮಾಡಲಾಗಿದೆ. ಆದರೂ, ಬೆಂಗಳೂರಿನಿಂದ ಅವರು ತಮ್ಮ ಜಿಲ್ಲೆಗಳಿಗೆ ಹಿಂದಿರುಗುವುದನ್ನು ತಡೆಯುವ ಸಲುವಾಗಿ ಹೆಚ್ಚುವರಿ 2,000 ಹಣ ಖಾತೆಗೆ ಜಮೆ.

#ನೇಕಾರರ ಯೋಗಕ್ಷೇಮಕ್ಕಾಗಿ ಖಾತೆಗೆ ತಲಾ 2,000 ಜಮಾ. ನೇಕಾರಿಗೆ ಉದ್ಯಮದ ಬೆಳವಣಿಗೆಗಾಗಿ ನೇಕಾರ ಸಮ್ಮಾನ್ ಯೋಜನೆ ಮೂಲಕ 80 ಕೋಟಿ ರೂ ಬಿಡುಗಡೆ. ಕಳೆದ ವರ್ಷ ನೇಕಾರರು ಪಾವತಿಸಿದ್ದ 1 ಲಕ್ಷ ವರೆಗಿನ ಸಾಲ ವಾಪಸ್‌.

# ರಾಜ್ಯದಲ್ಲಿ ಈ ವರ್ಷ 11,675 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಹೂವಿನ ಬೆಳೆ ನಾಶವಾಗಿದೆ. ಹೀಗಾಗು ಹೂ ಬೆಳೆಗಾರರಿಗೆ ಆರ್ಥಿಕ ನೆರವು ಘೋಷಣೆ. ಒಂದು ಎಕರೆಗೆ ತಲಾ 25,000 ರೂ ಪರಿಹಾರ.# ಸಣ್ಣ ಮತ್ತು ಮದ್ಯಮ ಕೈಗಾರಿಗೆಗಳ 2 ತಿಂಗಳ ವಿದ್ಯುತ್‌ ಬಿಲ್ ಮನ್ನಾ
# ಗ್ರಾಹಕರ ವಿದ್ಯುತ್‌ ಬಿಲ್ ಮೇಲೆ ಶೇ.1 ರಷ್ಟು ಕಡಿತ.
# ತರಕಾರಿ ಮತ್ತು ಹಣ್ಣು ಬೆಳೆಗಾರರಿಗೂ ನೆರವು ನೀಡುವ ಭರವಸೆ ನೀಡಿದ ಬಿಎಸ್‌ವೈ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ